Archive for November, 2005

Vishva Kannada in Firefox

Filed under: Tech related Monday, November 28th, 2005  By admin |

Someone complained that Vishva Kannada is not properly viewable in Firefox under Windows. I just now opened Vishva Kannada in Firefox. I did not find any problem. I use Windows XP SP2. Attached below is the screenshot.

ಮುಂಬಯಿ ಪೋಲೀಸರ ಕಾರ್ಯವೈಖರಿ

Filed under: General Sunday, November 27th, 2005  By admin |

ಒಮ್ಮೆ ಮುಂಬಯಿಗೆ ಭೇಟಿ ನೀಡಿದ್ದೆ. ವಿಮಾನ ನಿಲ್ದಾಣದ ಸಮೀಪ ಇರುವ ಪಂಚತಾರಾ ಹೋಟೆಲಿನ ಎದುರುಗಡೆಯ ರಸ್ತೆಯಲ್ಲಿ ಒಂದು ಟ್ಯಾಕ್ಸಿ ಹಿಡಿದೆ. ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ಗೆ ಹೋಗಬೇಕಿತ್ತು. ಚಾಲಕ, ಬಹುಶಃ ಪಂಚತಾರಾ ಹೋಟೆಲಿನ ಎದುರುಗಡೆಯಿಂದ ಟ್ಯಾಕ್ಸಿ ಹಿಡಿದುದಕ್ಕೆ ಇರಬೇಕು, “ನೂರು ರೂಪಾಯಿ ಆಗುತ್ತದೆ” ಎಂದ. ನಾನು “ಮೀಟರು ಪ್ರಕಾರ ಬರುವುದಿದ್ದರೆ ಮಾತ್ರ ಬಾ. ಇಲ್ಲದಿದ್ದರೆ ಬೇರೆ ಟ್ಯಾಕ್ಸಿ ಹಿಡಿಯುತ್ತೇನೆ” ಎಂದು ಹೇಳಿ ಟ್ಯಾಕ್ಸಿಯಿಂದ ಇಳಿಯಲು ಅನುವಾದೆ. ಆತ ಕೂಡಲೆ ವರಸೆ ಬದಲಿಸಿ “ಕುಳಿತುಕೊಳ್ಳಿ, ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ನನಗೆ ಬೇಕಾದಲ್ಲಿಗೆ ಕರೆದುಕೊಂಡು ಹೋದ. ಅಲ್ಲಿ ಇಳಿದಾಗ ಪುನ ನೂರು ರೂಪಾಯಿ ಕೊಡಲು ಒತ್ತಾಯಿಸಿದ. ಮೀಟರಿನಲ್ಲಿ ಎಪ್ಪತ್ತು ರೂ ಆಗಿತ್ತು. ನಾನು ನೂರು ರೂ ಕೊಡಲು ಒಪ್ಪಲಿಲ್ಲ. ಎಪ್ಪತ್ತು ರೂ ಮಾತ್ರ ಕೊಡುತ್ತೇನೆ ಎಂದು ಹೇಳಿ, ನನ್ನಲ್ಲಿ ಚಿಲ್ಲರೆ ಇಲ್ಲದಿದ್ದ ಪ್ರಯುಕ್ತ ನೂರು ರೂಪಾಯಿನ ನೋಟು ನೀಡಿದೆ. ಆತ ಟ್ಯಾಕ್ಸಿ ಹೊರಡಿಸಲು ಅನುವಾದ. ಬಾಕಿ ಮೂವತ್ತು ರೂ ಕೇಳಿದರೆ “ಬೇಕಿದ್ದರೆ ಪೋಲೀಸ್ ಸ್ಟೇಶನ್ನಿಗೆ ಹೋಗಿ ಕೇಳು” ಎಂದು ದಬಾಯಿಸಿ ಟ್ಯಾಕ್ಸಿಯನ್ನು ಓಡಿಸಿಕೊಂಡು ಹೋದ. ಅಲ್ಲಿ ನಾನು ಹೋಗಬೇಕಾಗಿದ್ದ ಕಂಪೆನಿಯಲ್ಲಿ ನನ್ನ ಕೆಲಸ ಆದ ಬಳಿಕ ಸಮೀಪದಲ್ಲೇ ಇದ್ದ ಪೋಲೀಸ್ ಠಾಣೆಗೆ ಹೋಗಿ ಕಥೆ ಪೂರ್ತಿ ಹೇಳಿ ಟ್ಯಾಕ್ಸಿಯ ನಂಬರ್ ಬರೆದುಕೊಂಡಿದ್ದ ಕಾಗದದ ಚೂರನ್ನು ನೀಡಿದೆ. ಆತ ಆ ಕಾಗದವನ್ನು ಕಿಸೆಗೆ ಹಾಕಿಕೊಂಡು “ಈಗ ನಿಮಗೆ ಮೂವತ್ತು ರೂ ಬರಬೇಕು, ಅಷ್ಟೆ ತಾನೆ” ಎಂದು ಹೇಳಿ ಕಿಸೆಯಿಂದ ಮೂವತ್ತು ರೂ ತೆಗೆದು ನೀಡಿದ. ನನಗೆ ಆಶ್ಚರ್ಯವಾಯಿತು. “ನೀವು ಯಾಕೆ ಕೊಡುತ್ತಿದ್ದೀರಾ?” ಎಂದು ಪ್ರಶ್ನಿಸಿದೆ. ಆತ “ಈ ಟ್ಯಾಕ್ಸಿ ಡ್ರೈವರ್ ಇಲ್ಲೇ ಸುತ್ತಾಡುತ್ತಿರುತ್ತಾನೆ. ನಮಗೆ ಸಿಕ್ಕೇ ಸಿಗುತ್ತಾನೆ. ಆತನ ಕೈಯಿಂದ ನಾವು ವಸೂಲು ಮಾಡಿಕೊಳ್ಳುತ್ತೇವೆ. ಈಗ ನೀವು ಇಲ್ಲಿಂದ ಹೋಗಬಹುದು” ಎಂದ! ಬೆಂಗಳೂರಿನಲ್ಲಿ ರಿಕ್ಷಾ ಡ್ರೈವರುಗಳ ವಿರುದ್ಧ ಪೋಲೀಸರಿಗೆ ದೂರು ನೀಡಲು ಪ್ರಯತ್ನಿಸಿದ್ದೀರಾ?

ಅನುದಾನ ಅಕಾಡೆಮಿ ಖಂಡಿತ ಬೇಕು

Filed under: General Friday, November 25th, 2005  By admin |

ಸಂಪಾದಕರು
ವಾಚಕರವಾಣಿ
ಪ್ರಜಾವಾಣಿ
ಬೆಂಗಳೂರು ೫೬೦೦೦೧ -ಇವರಿಗೆ

ವಿಷಯ: ಅನುದಾನ ಅಕಾಡೆಮಿ ಖಂಡಿತ ಬೇಕು

Inkscape 0.43 released

Filed under: Tech related Thursday, November 24th, 2005  By admin |

Opensource scalable vector graphics package [http://www.inkscape.org|Inkscape]’s new version has been released. It is still at version 0.43. It is the opensource alternative to popular CorelDraw and Adobe Illustrator. What I liked in Inkscpae is the support for Indian languages via opentype fonts. This feature is mssing both in CorelDraw and Illustrator. At last we can use Unicode and Indian languages in a vector graphics package.

ನಾಗೇಶ ಹೆಗಡೆಯವರಿಗೆ ಅಭಿನಂದನೆಗಳು

Filed under: General Wednesday, November 23rd, 2005  By admin |

ಈ ದಿನ ಬೆಳಗ್ಗೆ ಪ್ರಜಾವಾಣಿ ಓದುತ್ತಿದ್ದಂತೆ ಒಂದು ಒಳ್ಳೆಯ ಸುದ್ದಿ ಕಣ್ಣಿಗೆ ಬಿತ್ತು. ನಮ್ಮ ನೆಚ್ಚಿನ ಹಾಗೂ ಜನಪ್ರಿಯ ಕನ್ನಡ ವಿಜ್ಞಾನ ಲೇಖಕರಾದ ನಾಗೇಶ ಹೆಗಡೆಯವರಿಗೆ ಕರ್ನಾಟಕ ಸರಕಾರವು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ನೀಡಲು ತೀರ್ಮಾನಿಸಿರುವುದು.

ದೀಪ ಬೆಳಗಿ ಉದ್ಘಾಟಿಸುವುದು

Filed under: General Monday, November 21st, 2005  By admin |

ಸಾಮಾನ್ಯವಾಗಿ ಬಹುತೇಕ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾರ್ಯಕ್ರಮದ ಉದ್ಘಾಟನೆ ದೀಪ ಬೆಳಗುವ ಮೂಲಕ ಆಗುತ್ತದೆ. ಪೂಜೆ ಮಾಡಲು ನಿರಾಕರಿಸುವ ವಿಚಾರವಾದಗಳೂ ದೀಪ ಬೆಳಗುವುದನ್ನು ವಿರೋಧಿಸುವುದಿಲ್ಲ. ಅವರ ಪ್ರಕಾರ ದೀಪ ಎಂದರೆ ಬೆಳಕು ಎಂದರೆ ಜ್ಞಾನದ ಸಂಕೇತ. ಖಂಡಿತ ಹೌದು. ಅದನ್ನು ಎಲ್ಲರಿಗಿಂತ ಮೊದಲು ಹೇಳಿದ್ದು ಉಪನಿಷತ್ತಿನಲ್ಲಿ .”ತಮಸೋಮಾ ಜ್ಯೋತಿರ್ಗಮಯ” ಎಂದರೆ ಕತ್ತಲಿನಿಂದ ಬೆಳಕಿನೆಡೆಗೆ. ಅರೆಬೆಂದ ವಿಚಾರವಾದಿಗಳ ಮಾತು ಹಾಗಿರಲಿ. ಈಗ ಕಾರ್ಯಕ್ರಮಗಳಲ್ಲಿ ದೀಪ ಬೆಳಗುವ ಬಗ್ಗೆ ಬರೋಣ. ಮೊದಲನೆಯದಾಗಿ ದೀಪ ಬೆಳಗಲು ಅವರು ಬಳಸುವುದು ಕ್ಯಾಂಡಲನ್ನು. ಅದೇಕೋ ನನಗೆ ಸರಿ ಕಾಣುವುದಿಲ್ಲ. ಅದರ ಬದಲು ಒಂದು ಚಿಕ್ಕ ಹಣತೆ ತಂದರೆ ಚೆನ್ನಾಗಿರುತ್ತದಲ್ಲವೇ? ದೀಪ ಬೆಳಗುವುದು ಭಾರತೀಯ ಪದ್ಧತಿಯಾಗಿರುವಾಗ ಅದನ್ನೂ ಭಾರತೀಯವಾಗಿಯೇ ಮಾಡಿದರೆ ಚೆನ್ನಾಗಿರುತ್ತದಲ್ಲವೇ?

ನಿಜ ಹೇಳಬೇಕೆಂದರೆ!

Filed under: General Saturday, November 19th, 2005  By admin |

ನಿಜ ಹೇಳಬೇಕೆಂದರೆ, ನನಗೆ ಈ “ನಿಜ ಹೇಳಬೇಕೆಂದರೆ” ಎಂಬ ಮಾತಿನ ದುರುಪಯೋಗ ಕೇಳಿ ಕೇಳಿ ಸುಸ್ತಾಗಿದೆ. ನಿಜ ಹೇಳಬೇಕೆಂದರೆ, ಒಮ್ಮೆ ಕನ್ನಡದ ಖ್ಯಾತ ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ಜೊತೆ ಕನ್ನಡ ಭವನದಲ್ಲಿ “ಮನೆಯಂಗಳದಲ್ಲಿ ಮಾತುಕತೆ” ಕಾರ್ಯಕ್ರಮವಿತ್ತು. ನಿಜ ಹೇಳಬೇಕೆಂದರೆ, ನಾನು ಅಲ್ಲಿ ವೀಕ್ಷಕನಾಗಿ ಕುಳಿತು ಕೇಳುತ್ತಿದ್ದೆ. ಪ್ರತಿ ಪ್ರಶ್ನೆಗೂ ಅವರ ಉತ್ತರ “ನಿಜ ಹೇಳಬೇಕೆಂದರೆ” ಎಂದು ಪ್ರಾರಂಭವಾಗುತ್ತಿತ್ತು. ನಿಜ ಹೇಳಬೇಕೆಂದರೆ, ನನಗೆ ಒಂದು ಅನುಮಾನ -ಅದುವರೆಗೆ ನಿಸಾರ್ ಅಹಮದ್ ಅವರು ಬರೆದ ಕವನ, ಲೇಖನ, ಮಾಡಿದ ಭಾಷಣಗಳೆಲ್ಲ ಸುಳ್ಳೆ? ನಿಜ ಹೇಳಬೇಕೆಂದರೆ, ನಿಸಾರ್ ಅಹಮದ್ ಅವರೊಬ್ಬರೇ ಅಲ್ಲ, ಈ “ನಿಜ ಹೇಳಬೇಕೆಂದರೆ” ಎಂಬ ಮಾತನ್ನು ಬಹಳಷ್ಟು ಮಂದಿ ಬಹುತೇಕ ಭಾಷಣಗಳಲ್ಲಿ ಬಳಸುವುದನ್ನು ಕೇಳಿ ಕೇಳಿ ಬೇಸತ್ತಿದ್ದೇನೆ.

ಕರ್ನಾಟಕ ಸರಕಾರದ ಅಂತರಜಾಲ ತಾಣ

Filed under: Tech related Friday, November 18th, 2005  By admin |

ಸುಮ್ಮನೆ ಕುತೂಹಲಕ್ಕೆ ಕರ್ನಾಟಕ ಸರಕಾರದ ಅಂತರಜಾಲ ತಾಣ ತೆರೆದೆ. ಅಲ್ಲಿ ಇಲ್ಲಿ ಕ್ಲಿಕ್ ಮಾಡುತ್ತ ವಿಧಾನ ಸಭೆ ಮತ್ತು ಪರಿಷತ್ತಿನ ಸದಸ್ಯರ ಪಟ್ಟಿ ತೆರೆದೆ. ಅಲ್ಲೊಂದು ಆಶ್ಚರ್ಯ ಕಾದಿತ್ತು. ವಿಧಾನ ಪರಿಷತ್ತಿನ ಸದಸ್ಯರ ಪಟ್ಟಿಯಲ್ಲಿ ಇತ್ತೀಚೆಗೆ ನಿಧನರಾದ ಬಿಜೆಪಿ ಸದಸ್ಯ ಡಾ. ಎಂ. ಆರ್. ತಂಗ ಅವರ ಹೆಸರೂ ಇತ್ತು. ಹೆಸರಿನ ಮುಂದೆ ೨೧-೬-೨೦೦೬ ರಲ್ಲಿ ನಿವೃತ್ತರಾಗುತ್ತಾರೆ ಎಂದೂ ಇತ್ತು. ಏನನ್ನುತ್ತೀರಾ? ಈ ಹಿಂದೆಯೂ ಕರ್ನಾಟಕ ಸರಕಾರದ ಅಂತರಜಾಲ ತಾಣಗಳ ಬಗ್ಗೆ ಇದೇ ರೀತಿಯ ಹಲವು ದೂರುಗಳು ಬಂದಿದ್ದವು. ಈಗಲಾದರೂ ಸುಧಾರಿಸಿರಬಹುದು ಎಂದುಕೊಂಡರೆ …

Windows Starter Edition for India

Filed under: Tech related Tuesday, November 15th, 2005  By admin |

It was a long pending demand from India. We need a low cost OS for India. Indians can not afford the heavily priced in US$ equivalent – converted to Indian Rs – software from Microsoft and other biggies like Adobe, Macromedia, Quark, etc. Finally, Microsoft has relaised that if it has to reach the 90% of the Indian population who do not speak English, they need to bring down the low cost versions of Windows. Microsoft announced the availability of started edition of Windows for India. Bill Gates announced 7-point formula for Indian when Dayanidhi Maran, the IT minister of India, visited Redmond, Microsoft. This is a good step. These will help the propagation of IT in India and will help in reducing the digital divide.

ಪುಸ್ತಕ ಮೇಳ

Filed under: General Tuesday, November 15th, 2005  By admin |

ಬೆಂಗಳೂರು ಪುಸ್ತಕೋತ್ಸವ ಮತ್ತೊಮ್ಮೆ ಬಂದಿದೆ. ಕಳೆದ ವರ್ಷದಂತೆ ಈ ಸಲವೂ ಬಹಳ ಆಸಕ್ತಿಯಿಂದ ಹೋದೆ. ದುಃಖದ ಸಂಗತಿಯೆಂದರೆ ಹೋದ ವರ್ಷದಂತೆ ಈ ವರ್ಷವೂ ನಿರಾಸೆಯಿಂದ ವಾಪಾಸು ಬಂದೆ ಎಂದೇ ಹೇಳಬಹುದು.

RSS Feeds