Archive for June, 2007

ಘೋಷಿಸಿ ಧಾಳಿ ಮಾಡಿದರೇನು ಫಲ?

Filed under: General Thursday, June 28th, 2007  By admin |

ಜೂನ್ ೨೨ರಂದು ಎಲ್ಲ ಪತ್ರಿಕೆಗಳಲ್ಲಿ ಚಿತ್ರ ಸಮೇತ ಒಂದು ಸುದ್ದಿ ಪ್ರಕಟವಾಗಿತ್ತು. ಡೆಕ್ಕನ್ ಹೆರಾಲ್ಡ್‌ನ ಅಂತರಜಾಲ ಆವೃತ್ತಿಯಲ್ಲಿ ಅದನ್ನು ಈಗಲೂ ಓದಬಹುದು. ಆ ಸುದ್ದಿ ಏನೆಂದರೆ ಕರ್ನಾಟಕ ಸರಕಾರದ ಅಬಕಾರಿ ಇಲಾಖೆಯವರು ಬೆಂಗಳೂರಿನ ಸುತ್ತಮುತ್ತ ಕಳ್ಳಭಟ್ಟಿ ತಯಾರಿಸುವ ಸ್ಥಳಗಳಿಗೆ ಧಾಳಿ ಇತ್ತು ಕಳ್ಳಭಟ್ಟಿ ದಾಸ್ತಾನುಗಳನ್ನು ನಾಶ ಮಾಡಿದರು ಎಂಬುದಾಗಿ. ಸುದ್ದಿಯಲ್ಲಿ ಬರುವ ಒಂದು ಪ್ಯಾರವನ್ನು ಗಮನಿಸಿ-

ಮಾಹಿತಿ ತಂತ್ರಜ್ಞಾನ ಕನ್ನಡ ಶಿಕ್ಷಣ ಬಗ್ಗೆ ಕಾರ್ಯಾಗಾರ

Filed under: Tech related Sunday, June 10th, 2007  By admin |

ಶೈಕ್ಷಣಿಕ ಕ್ಷೇತ್ರದಲ್ಲಿ ಗಣಕಗಳ, ಅದರಲ್ಲೂ ಕನ್ನಡ ಭಾಷೆಯ ಮೂಲಕ ಬಳಸುವುದರಲ್ಲಿ ಮೂರು ವಿಭಾಗಗಳಿವೆ. ಗಣಕ ಎಂದರೇನು ಎಂಬುದನ್ನು ಕನ್ನಡ ಭಾಷೆಯಲ್ಲಿ ತಿಳಿಸುವುದು ಮೊದಲನೆಯದು. ಕನ್ನಡ ಭಾಷೆಯಲ್ಲಿ ಗಣಕಾಧಾರಿತ ಶಿಕ್ಷಣವನ್ನು ಬಳಸಿ ಬಹುಮಾಧ್ಯಮದ (multimedia) ಕಲಿಕಾರಂಜನೆಯ (edutainment) ಮೂಲಕ ಕನ್ನಡ, ವಿಜ್ಞಾನ, ಗಣಿತ, ಇತ್ಯಾದಿಗಳನ್ನು ಹೇಳಿಕೊಡುವುದು ಎರಡನೆಯದು. ಗಣಕ ಕ್ರಮವಿಧಿ (programming language) ತಯಾರಿಯ ಮೂಲ ಸಿದ್ಧಾಂತ (ತರ್ಕ, programming logic) ವನ್ನು ಕನ್ನಡ ಭಾಷೆಯಲ್ಲೇ ಕಲಿಸುವುದು ಮೂರನೆಯದು.

RSS Feeds