ಪಿತ್ತ ಸಚಿವ!?

Filed under: Featured Article, General Tuesday, September 30th, 2008  By admin |

ಕೇಂದ್ರ ಸರಕಾರದಲ್ಲೊಬ್ಬ ಪಿತ್ತ ಸಚಿವ ಇರುವುದು ನಿಮಗೆ ಗೊತ್ತೆ? ಆಶ್ಚರ್ಯವಾಯಿತೇ? ಹಾಗಿದ್ದರೆ ಜೊತೆಗೆ ಇರುವ ಭಾವಚಿತ್ರ ನೋಡಿ. ಇದು ದೂರದರ್ಶನದ ಕನ್ನಡ ವಾಹಿನಿ ಚಂದನದಲ್ಲಿ ವಾರ್ತಾಪ್ರಸಾರ ಆಗುತ್ತಿದ್ದಾಗ ತೆಗೆದ ಚಿತ್ರ (೩೦-೯-೨೦೦೮)

ದ್ವಿಭಾಷಾ ಫಾಂಟ್ ಬಗ್ಗೆ ಕರ್ನಾಟಕ ಸರಕಾರಕ್ಕೆ ನನ್ನ ಪತ್ರ

Filed under: Featured Article, Tech related Saturday, June 14th, 2008  By admin |

ಎಲ್ಲರೂ ಮುಂದೆ, ನಾನೊಬ್ಬ ಹಿಂದೆ

Filed under: Featured Article, Tech related Sunday, June 8th, 2008  By admin |

ಕರ್ನಾಟಕ ಸರಕಾರದ ನೀತಿಯೇನೆಂದರೆ ಜಗತ್ತೆಲ್ಲ ಮುಂದೆ ಮುಂದೆ ಸಾಗುತ್ತಿರಲಿ, ನಾನೊಬ್ಬ ಮಾತ್ರ ಹಿಂದೆ ಹಿಂದೆ

ಕನ್ನಡ ಬ್ಲಾಗೋತ್ತಮರ ಸಭೆ

Filed under: Featured Article, General Sunday, March 9th, 2008  By admin |

ಕನ್ನಡ ಭಾಷೆಯಲ್ಲಿ ಬ್ಲಾಗಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ನಿಜಕ್ಕೂ ಸಂತಸದ ಸುದ್ದಿ. ಈ ಎಲ್ಲ ಬ್ಲಾಗೋತ್ತಮರುಗಳು ಎಂದಾದರೂ ಮುಖಾಮುಖಿ ಭೇಟಿಯಾದುದು ಇದೆಯೇ? ಬಹುಶಃ ಇಲ್ಲ. ಕೆಲವು ಮಂದಿ ಅಲ್ಲಿ ಇಲ್ಲಿ ಭೇಟಿಯಾಗಿರಬಹುದು. ಆದರೆ ಬ್ಲಾಗಿಗಳೇ ಪ್ರತ್ಯೇಕವಾಗಿ ಸಭೆ ಸೇರಿದ್ದು ಇಲ್ಲ. ಭಾರತೀಯ ಬ್ಲಾಗಿಗಳ ಸಭೆ ಹಲವು ಬಾರಿ ಬೇರೆ ಬೇರೆ ನಗರಗಳಲ್ಲಿ ಜರುಗಿವೆ. ಆದರೆ ಕನ್ನಡ ಬ್ಲಾಗಿಗಳ ಸಭೆ ಇದುವರೆಗೆ ಜರುಗಿಲ್ಲ.

ಬೆಂಗಳೂರಿನಲ್ಲಿ ಮೈಕೇಲ್ ಕಪ್ಲಾನ್

Filed under: Featured Article, Tech related Friday, January 25th, 2008  By admin |

ಮೈಕೇಲ್ ಕಪ್ಲಾನ್ ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ತಂತ್ರಾಂಶಗಳ ಜಾಗತೀಕರಣ ವಿಭಾಗದಲ್ಲಿ ಪ್ರಮುಖ ಹುದ್ದೆಯಲ್ಲಿರುವ ತಂತ್ರಜ್ಞರು. ತಂತ್ರಾಂಶ ಜಾಗತೀಕರಣ ವಿಷಯದಲ್ಲಿ ಕೆಲಸ ಮಾಡುತ್ತಿರುವವರು ಮಾತ್ರವಲ್ಲದೆ ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ಎಲ್ಲರಿಗೂ ಇವರ ಹೆಸರು ಪರಿಚಯವಿದೆ. ಇವರು ಭಾರತಕ್ಕೆ ಬರುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿರುವ ಮೈಕ್ರೋಸಾಫ್ಟ್ ಸಂಶೋದನಾ ಕೇಂದ್ರದ ಮೂಲಕ ತಿಳಿದು ಬಂತು. ಕೂಡಲೇ ನಾನು ಕಪ್ಲಾನರನ್ನು ಸಂಪರ್ಕಿಸಿ ನಮ್ಮ ಬೆಂಗಳೂರಿನ ಡಾಟ್‌ನೆಟ್ ಬಳಕೆದಾರರ ಸಂಘದಲ್ಲಿ ಒಂದು ಭಾಷಣ ನೀಡಲು ಸಾಧ್ಯವೇ ಎಂದು ಕೇಳಿಕೊಂಡೆ. ಕೂಡಲೇ ಅವರಿಂದ ಉತ್ತರ ಬಂತು “ಇದು ನನಗೆ ನೀಡುತ್ತಿರುವ ಗೌರವ ಎಂದು ಭಾವಿಸಿಕೊಂಡು ಒಪ್ಪಿಗೆ ನೀಡುತ್ತಿದ್ದೇನೆ”.

ಜಂಗಮವಾಣಿಯಲ್ಲಿ ಕನ್ನಡ

Filed under: Featured Article, Tech related Sunday, January 13th, 2008  By admin |

ಮೊಬೈಲ್ ಫೋನುಗಳಲ್ಲಿ ಎಸ್‌ಎಂಎಸ್ ಮಾಡುವಾಗ ಎಲ್ಲರೂ ಕಂಗ್ಲಿಶ್ ಬಳಸುವುದು ಸಹಜವಾಗಿಬಿಟ್ಟಿದೆ. ಇದರಿಂದಾಗಿ ಎಫ್‌ಎಂ ರೇಡಿಯೋ ಚಾನೆಲುಗಳಿಗೆ ಕಳುಹಿಸಿದ ಸಂದೇಶಗಳನ್ನು ಓದುವಾಗ ಅಲ್ಲಲ್ಲಿ ತಡವರಿಸುತ್ತಾರೆ. ಕೆಲವೊಮ್ಮೆ ಸಂದೇಶ ಮತ್ತು ಹೆಸರುಗಳನ್ನು ಓದುವಾಗ ತಪ್ಪುಗಳೂ ಸಂಭವಿಸುತ್ತವೆ. ಉದಾಹರಣೆಗೆ ಸಂದೇಶ ಕಳುಹಿಸಿದವರು ತಮ್ಮ ಹೆಸರನ್ನು rama ಎಂದು ಬೆರಳಚ್ಚು ಮಾಡಿದ್ದಾರೆಂದಿಟ್ಟುಕೊಳ್ಳಿ. ಇದು ರಾಮ ಅಥವಾ ರಮಾ ಇರಬಹುದು. ಕನ್ನಡದಲ್ಲೇ ಸಂದೇಶ ಕಳುಹಿಸಿದರೆ ಈ ಗಲಿಬಿಲಿ ಇರುವುದಿಲ್ಲ. ಆದರೆ ಸದ್ಯಕ್ಕೆ ಯಾವ ಮೊಬೈಲ್ ಫೋನುಗಳಲ್ಲೂ ಈ ಸೌಲಭ್ಯವಿಲ್ಲ. ಮೊಬೈಲ್ ತಂತ್ರಾಂಶಗಳಿಗೂ ಈ ಮಾತು ಅನ್ವಯಿಸುತ್ತದೆ. ಆದರೆ ಈ ಸಮಸ್ಯೆಗೆ ಪರಿಹಾರ ಇದೆ. ಬೆಂಗಳೂರಿನ ಹಸ್ತ ಸೊಲುಶನ್ಸ್ ಕಂಪೆನಿ ಮೊಬೈಲ್ ಫೋನುಗಳಿಗೆ ಭಾರತೀಯ ಭಾಷೆಗಳನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದೆ. ಕನ್ನಡವೂ ಈ ಪಟ್ಟಿಯಲ್ಲಿದೆ. ಕನ್ನಡ ಭಾಷೆಯನ್ನು ಅಳವಡಿಸುವುದೆಂದರೆ ಕೇವಲ ಕನ್ನಡದಲ್ಲಿ ಬೆರಳಚ್ಚು ಮಾಡುವುದಲ್ಲ. ಕನ್ನಡದ ತಂತ್ರಾಂಶಗಳು ತಯಾರಾಗಿವೆ. ಭೂಮಿ ತಂತ್ರಾಂಶಕ್ಕೆ ಬೆಳೆಗಳ ವಿವರ ಸೇರಿಸುವುದು, ಅಂಗನವಾಡಿ ಕಾರ್ಯಕರ್ತರು ತಾವು ಸಂಗ್ರಹಿಸಿದ ಮಾಹಿತಿಗಳನ್ನು ಊಡಿಸುವುದು, ಮತ್ತು ಇನ್ನೂ ಒಂದೆರಡು ಕನ್ನಡದ ಆನ್ವಯಿಕ ತಂತ್ರಾಂಶಗಳನ್ನು ಈ ಕಂಪೆನಿ ಅಭಿವೃದ್ಧಿಪಡಿಸಿದೆ. ಜಗತ್ತಿನ ತಂತ್ರಾಂಶ ದೈತ್ಯ ಮೈಕ್ರೋಸಾಫ್ಟ್ ಕಂಪೆನಿ ಭಾರತೀಯ ಭಾಷೆಗಳನ್ನು ಮೊಬೈಲ್ ಫೋನುಗಳಲ್ಲಿ ಅಳವಡಿಸುವತ್ತ ಏನೂ ಕೆಲಸ ಮಾಡಿಲ್ಲ. ಇಂತಹ ಸಂದರ್ಭದಲ್ಲಿ ನಮ್ಮವರದೇ ಕಂಪೆನಿ ಹಸ್ತ ಸೊಲುಶನ್ಸ್ ಕನ್ನಡವನ್ನು ಮೊಬೈಲ್ ಫೋನಿನಲ್ಲಿ ಅಳವಡಿಸಿದೆ. ಸರಕಾರವು ಇವರಿಗೆ ಪ್ರೋತ್ಸಾಹ ನೀಡಬೇಕಾಗಿದೆ.

ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯಾಗಾರ

Filed under: Tech related Friday, December 14th, 2007  By admin |

ದಯವಿಟ್ಟು ಈ ಪುಟ ಓದಿ -http://vishvakannada.com/node/338. ಅದರ ಕೊನೆಯಲ್ಲಿ ಬರುವ ಒಂದು ಸಂಭಾಷಣೆಯ ಕಡೆಗೆ ಸ್ವಲ್ಪ ಜಾಸ್ತಿ ಗಮನ ಕೊಡಿ.

ನಾಗೇಶ ಹೆಗಡೆ ಮತ್ತು ಜಿ.ಟಿ.ಎನ್‌ರಿಗೆ ಅಭಿನಂದನೆಗಳು

Filed under: General Sunday, November 4th, 2007  By admin |

ಈ ಸಲದ ರಾಜ್ಯೋತ್ಸವ ಪ್ರಶಸ್ತಿಗೆ ಒಂದು ವೈಶಿಷ್ಟ್ಯವಿದೆ. ಸರಕಾರವಿಲ್ಲದೆ ಯಾವುದೇ ರಾಜಕಾರಣಿಯ ವಶೀಲಿಯಿಲ್ಲದೆ ನೀಡಿದ ಪ್ರಶಸ್ತಿಯಿದು. ಈ ಸಲದ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರು. ಹೀಗಾಗಿ ಈ ಸಲದ ಪ್ರಶಸ್ತಿಗೆ ಭಾಜನರಾದವರ ಹೆಸರುಗಳಿಗೆ ಯಾವುದೇ ಕಳಂಕವಿಲ್ಲ.

ಭಾರತೀಯ ಗೋವು – ವಿದೇಶೀ ಗೋವು

Filed under: General Sunday, September 2nd, 2007  By admin |

ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ಭಾರತೀಯ ಗೋತಳಿಗಳ ಸಂರಕ್ಷಣೆಗೆ ಕಂಕಣಬದ್ಧರಾಗಿ ದುಡಿಯುತ್ತಿರುವುದು ಎಲ್ಲರಿಗೂ ತಿಳಿದಿರಬಹುದು. ವಿದೇಶಿ ತಳಿಯ ಹಸುಗಳು ನಮ್ಮ ಹವಾಮಾನಕ್ಕೆ ಒಗ್ಗುವುದಿಲ್ಲ, ಅವುಗಳಿಗೆ ತುಂಬ ಔಷಧೋಪಚಾರ, ನಿಯಂತ್ರಿತ ಹವೆ ಎಲ್ಲ ಅಗತ್ಯ ಎಂಬುದಾಗಿ ನಾವೆಲ್ಲ ಕೇಳಿದ್ದೇವೆ. ಭಾರತೀಯ ಗೋತಳಿಗಳು ಇಲ್ಲಿಯ ಹವಾಮಾನಕ್ಕೆ ಒಗ್ಗಿದವು. ಅವುಗಳಿಗೆ ಈ ಉಪಚಾರಗಳ ಅಗತ್ಯವಿಲ್ಲ. ನಾವು ಚಿಕ್ಕವರಿದ್ದಾಗ ಭಾರತೀಯ ಹಸುಗಳ ಹಾಲನ್ನೇ ಕುಡಿದವರು. ಆಗ ಯಾವ ಹಸುವಿಗೂ ದೊಡ್ಡ ಖಾಯಿಲೆ ಬಾಧಿಸಿದ್ದು ನನಗೆ ನೆನಪಿಲ್ಲ. ಚಿಕ್ಕಪುಟ್ಟ ಖಾಯಿಲೆಗಳು ಬಾಧಿಸಿದರೂ ಹಳ್ಳಿ ಔಷಧಿಂದಲೇ ಅವು ಗುಣವಾಗುತ್ತಿದ್ದವು. ಈಗ ಎಲ್ಲರೂ ಸಾಕುತ್ತಿರುವ ವಿದೇಶೀ ಮೂಲದ ತಳಿಸಂಕರದಿಂದ ಹುಟ್ಟಿದ ಹಸುಗಳಿಗೆ ದೊಡ್ಡ ದೊಡ್ಡ ಖಾಯಿಲೆಗಳೇ ಬಾಧಿಸುತ್ತವೆ. ಅವಕ್ಕೆ ನೀಡಬೇಕಾದ ಔಷಧಿಗೂ ಸಾವಿರಾರು ರೂಪಾಯಿ ನೀಡಬೇಕಾಗುತ್ತದೆ. ಇದೆಲ್ಲ ಯಾಕೆ ಹೇಳಿದ್ದೆಂದರೆ ಒಂದು ಉದಾಹರಣೆ ನನ್ನಲ್ಲೇ ಇದೆ.

ನಾವೂ ಹೀಗೆ ಮಾಡಬೇಕು

Filed under: General Saturday, July 28th, 2007  By admin |

ಚೀನಾದಲ್ಲಿ ಒಬ್ಬ ಲಾಯರ್‍ ಮೆಕ್‌ಡೊನಾಲ್ಡ್ ಕಂಪೆನಿಯ ಮೇಲೆ ಕೇಸು ಹಾಕಿರುವುದು ವರದಿಯಾಗಿದೆ. ಮೆಕ್‌ಡೊನಾಲ್ಡ್‌ನವರು ಬಿಸಿಯಾದ ಕಾಫಿ ನೀಡುವುದರ ವಿರುದ್ಧ, ಪ್ರಾಣಿ ಮಾಂಸದಿಂದ ತಯಾರಿಸಿದ ಎಣ್ಣೆಯನ್ನು ಬಳಸುವುದರ ವಿರುದ್ಧ ಎಲ್ಲ ಈ ಹಿಂದೆ ಕೇಸುಗಳು ದಾಖಲಾಗಿದ್ದವು. ಆದರೆ ಈ ಕೇಸು ಸ್ವಲ್ಪ ವಿಶೇಷವಾಗಿದೆ. ಚೀನಾದ ಭಾಷೆಯನ್ನು ಬಳಸದಿರುವುದರ ವಿರುದ್ಧ ಈ ಕೇಸು ಹಾಕಲಾಗಿದೆ.

RSS Feeds