ಪಿತ್ತ ಸಚಿವ!?

Filed under: Featured Article, General Tuesday, September 30th, 2008  By  |

ಕೇಂದ್ರ ಸರಕಾರದಲ್ಲೊಬ್ಬ ಪಿತ್ತ ಸಚಿವ ಇರುವುದು ನಿಮಗೆ ಗೊತ್ತೆ? ಆಶ್ಚರ್ಯವಾಯಿತೇ? ಹಾಗಿದ್ದರೆ ಜೊತೆಗೆ ಇರುವ ಭಾವಚಿತ್ರ ನೋಡಿ. ಇದು ದೂರದರ್ಶನದ ಕನ್ನಡ ವಾಹಿನಿ ಚಂದನದಲ್ಲಿ ವಾರ್ತಾಪ್ರಸಾರ ಆಗುತ್ತಿದ್ದಾಗ ತೆಗೆದ ಚಿತ್ರ (೩೦-೯-೨೦೦೮)

ಕನ್ನಡ ಬ್ಲಾಗೋತ್ತಮರ ಸಭೆ

Filed under: Featured Article, General Sunday, March 9th, 2008  By  |

ಕನ್ನಡ ಭಾಷೆಯಲ್ಲಿ ಬ್ಲಾಗಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ನಿಜಕ್ಕೂ ಸಂತಸದ ಸುದ್ದಿ. ಈ ಎಲ್ಲ ಬ್ಲಾಗೋತ್ತಮರುಗಳು ಎಂದಾದರೂ ಮುಖಾಮುಖಿ ಭೇಟಿಯಾದುದು ಇದೆಯೇ? ಬಹುಶಃ ಇಲ್ಲ. ಕೆಲವು ಮಂದಿ ಅಲ್ಲಿ ಇಲ್ಲಿ ಭೇಟಿಯಾಗಿರಬಹುದು. ಆದರೆ ಬ್ಲಾಗಿಗಳೇ ಪ್ರತ್ಯೇಕವಾಗಿ ಸಭೆ ಸೇರಿದ್ದು ಇಲ್ಲ. ಭಾರತೀಯ ಬ್ಲಾಗಿಗಳ ಸಭೆ ಹಲವು ಬಾರಿ ಬೇರೆ ಬೇರೆ ನಗರಗಳಲ್ಲಿ ಜರುಗಿವೆ. ಆದರೆ ಕನ್ನಡ ಬ್ಲಾಗಿಗಳ ಸಭೆ ಇದುವರೆಗೆ ಜರುಗಿಲ್ಲ.

ನಾಗೇಶ ಹೆಗಡೆ ಮತ್ತು ಜಿ.ಟಿ.ಎನ್‌ರಿಗೆ ಅಭಿನಂದನೆಗಳು

Filed under: General Sunday, November 4th, 2007  By  |

ಈ ಸಲದ ರಾಜ್ಯೋತ್ಸವ ಪ್ರಶಸ್ತಿಗೆ ಒಂದು ವೈಶಿಷ್ಟ್ಯವಿದೆ. ಸರಕಾರವಿಲ್ಲದೆ ಯಾವುದೇ ರಾಜಕಾರಣಿಯ ವಶೀಲಿಯಿಲ್ಲದೆ ನೀಡಿದ ಪ್ರಶಸ್ತಿಯಿದು. ಈ ಸಲದ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರು. ಹೀಗಾಗಿ ಈ ಸಲದ ಪ್ರಶಸ್ತಿಗೆ ಭಾಜನರಾದವರ ಹೆಸರುಗಳಿಗೆ ಯಾವುದೇ ಕಳಂಕವಿಲ್ಲ.

ಭಾರತೀಯ ಗೋವು – ವಿದೇಶೀ ಗೋವು

Filed under: General Sunday, September 2nd, 2007  By  |

ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ಭಾರತೀಯ ಗೋತಳಿಗಳ ಸಂರಕ್ಷಣೆಗೆ ಕಂಕಣಬದ್ಧರಾಗಿ ದುಡಿಯುತ್ತಿರುವುದು ಎಲ್ಲರಿಗೂ ತಿಳಿದಿರಬಹುದು. ವಿದೇಶಿ ತಳಿಯ ಹಸುಗಳು ನಮ್ಮ ಹವಾಮಾನಕ್ಕೆ ಒಗ್ಗುವುದಿಲ್ಲ, ಅವುಗಳಿಗೆ ತುಂಬ ಔಷಧೋಪಚಾರ, ನಿಯಂತ್ರಿತ ಹವೆ ಎಲ್ಲ ಅಗತ್ಯ ಎಂಬುದಾಗಿ ನಾವೆಲ್ಲ ಕೇಳಿದ್ದೇವೆ. ಭಾರತೀಯ ಗೋತಳಿಗಳು ಇಲ್ಲಿಯ ಹವಾಮಾನಕ್ಕೆ ಒಗ್ಗಿದವು. ಅವುಗಳಿಗೆ ಈ ಉಪಚಾರಗಳ ಅಗತ್ಯವಿಲ್ಲ. ನಾವು ಚಿಕ್ಕವರಿದ್ದಾಗ ಭಾರತೀಯ ಹಸುಗಳ ಹಾಲನ್ನೇ ಕುಡಿದವರು. ಆಗ ಯಾವ ಹಸುವಿಗೂ ದೊಡ್ಡ ಖಾಯಿಲೆ ಬಾಧಿಸಿದ್ದು ನನಗೆ ನೆನಪಿಲ್ಲ. ಚಿಕ್ಕಪುಟ್ಟ ಖಾಯಿಲೆಗಳು ಬಾಧಿಸಿದರೂ ಹಳ್ಳಿ ಔಷಧಿಂದಲೇ ಅವು ಗುಣವಾಗುತ್ತಿದ್ದವು. ಈಗ ಎಲ್ಲರೂ ಸಾಕುತ್ತಿರುವ ವಿದೇಶೀ ಮೂಲದ ತಳಿಸಂಕರದಿಂದ ಹುಟ್ಟಿದ ಹಸುಗಳಿಗೆ ದೊಡ್ಡ ದೊಡ್ಡ ಖಾಯಿಲೆಗಳೇ ಬಾಧಿಸುತ್ತವೆ. ಅವಕ್ಕೆ ನೀಡಬೇಕಾದ ಔಷಧಿಗೂ ಸಾವಿರಾರು ರೂಪಾಯಿ ನೀಡಬೇಕಾಗುತ್ತದೆ. ಇದೆಲ್ಲ ಯಾಕೆ ಹೇಳಿದ್ದೆಂದರೆ ಒಂದು ಉದಾಹರಣೆ ನನ್ನಲ್ಲೇ ಇದೆ.

ನಾವೂ ಹೀಗೆ ಮಾಡಬೇಕು

Filed under: General Saturday, July 28th, 2007  By  |

ಚೀನಾದಲ್ಲಿ ಒಬ್ಬ ಲಾಯರ್‍ ಮೆಕ್‌ಡೊನಾಲ್ಡ್ ಕಂಪೆನಿಯ ಮೇಲೆ ಕೇಸು ಹಾಕಿರುವುದು ವರದಿಯಾಗಿದೆ. ಮೆಕ್‌ಡೊನಾಲ್ಡ್‌ನವರು ಬಿಸಿಯಾದ ಕಾಫಿ ನೀಡುವುದರ ವಿರುದ್ಧ, ಪ್ರಾಣಿ ಮಾಂಸದಿಂದ ತಯಾರಿಸಿದ ಎಣ್ಣೆಯನ್ನು ಬಳಸುವುದರ ವಿರುದ್ಧ ಎಲ್ಲ ಈ ಹಿಂದೆ ಕೇಸುಗಳು ದಾಖಲಾಗಿದ್ದವು. ಆದರೆ ಈ ಕೇಸು ಸ್ವಲ್ಪ ವಿಶೇಷವಾಗಿದೆ. ಚೀನಾದ ಭಾಷೆಯನ್ನು ಬಳಸದಿರುವುದರ ವಿರುದ್ಧ ಈ ಕೇಸು ಹಾಕಲಾಗಿದೆ.

ಘೋಷಿಸಿ ಧಾಳಿ ಮಾಡಿದರೇನು ಫಲ?

Filed under: General Thursday, June 28th, 2007  By  |

ಜೂನ್ ೨೨ರಂದು ಎಲ್ಲ ಪತ್ರಿಕೆಗಳಲ್ಲಿ ಚಿತ್ರ ಸಮೇತ ಒಂದು ಸುದ್ದಿ ಪ್ರಕಟವಾಗಿತ್ತು. ಡೆಕ್ಕನ್ ಹೆರಾಲ್ಡ್‌ನ ಅಂತರಜಾಲ ಆವೃತ್ತಿಯಲ್ಲಿ ಅದನ್ನು ಈಗಲೂ ಓದಬಹುದು. ಆ ಸುದ್ದಿ ಏನೆಂದರೆ ಕರ್ನಾಟಕ ಸರಕಾರದ ಅಬಕಾರಿ ಇಲಾಖೆಯವರು ಬೆಂಗಳೂರಿನ ಸುತ್ತಮುತ್ತ ಕಳ್ಳಭಟ್ಟಿ ತಯಾರಿಸುವ ಸ್ಥಳಗಳಿಗೆ ಧಾಳಿ ಇತ್ತು ಕಳ್ಳಭಟ್ಟಿ ದಾಸ್ತಾನುಗಳನ್ನು ನಾಶ ಮಾಡಿದರು ಎಂಬುದಾಗಿ. ಸುದ್ದಿಯಲ್ಲಿ ಬರುವ ಒಂದು ಪ್ಯಾರವನ್ನು ಗಮನಿಸಿ-

ಕನ್ನಡದಿಂದ ಬದುಕುವ ತಮಿಳು ಟಿವಿ ಚಾನೆಲ್

Filed under: General Thursday, April 12th, 2007  By  |

ಇತ್ತೀಚೆಗೆ ನನ್ನ ಡಿಶ್ ಟಿವಿಯ ವಾರ್ಷಿಕ ಚಂದಾ ಮುಗಿದಿತ್ತು. ಅದನ್ನು ನವೀಕರಿಸುವುದೋ ಬೇಡವೋ ಎಂಬ ಆಲೋಚನೆಯಲ್ಲಿದ್ದಾಗ ಅವರು ಯಾವ ಯಾವ ಚಾನೆಲುಗಳನ್ನು ನೀಡುತ್ತಿದ್ದಾರೆ ಎಂಬುದನ್ನು ಮತ್ತೊಮ್ಮೆ ವಿಮರ್ಶೆ ಮಾಡಿದೆ. ಅವರು ನೀಡುವ ಚಾನೆಲುಗಳ ಪಟ್ಟಿಯಲ್ಲಿ ಕನ್ನಡದ ಉಚಿತ ಖಾಸಗಿ ಚಾನೆಲು ಯಾವುದೂ ಇಲ್ಲ. ಸರಕಾರವು ಉಚಿತವಾಗಿ ನೀಡುತ್ತಿರುವ ದೂರದರ್ಶನದ ಚಂದನ ಮಾತ್ರ ಇದೆ. ದೂರದರ್ಶನದ ಎಲ್ಲ ಚಾನೆಲುಗಳು ಉಚಿತವೇ. ಕನ್ನಡ ಮಾತ್ರವಲ್ಲ.

ಗಾಢಾಂಧಕಾರದೊಳು ನಟನ ಪಟು ಮೇಘ ಸಖಿ

Filed under: General Monday, March 26th, 2007  By  |

ಅಂತಾರಾಷ್ಟ್ರೀಯ ತಂತ್ರಾಂಶ ತಯಾರಿಯಲ್ಲಿ ಖ್ಯಾತರಾಗಿರುವ ಈಗ ಸದ್ಯಕ್ಕೆ ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ಕೆಲಸದಲ್ಲಿರುವ ಮೈಕೇಲ್ ಕಪ್ಲಾನ್ ತಮ್ಮ ಬ್ಲಾಗಿನಲ್ಲಿ ಒಮ್ಮೆ, ಎಲ್ಲ ಅಕ್ಷರಗಳೂ ಇರುವ ವಾಕ್ಯದ ಬಗ್ಗೆ ಬರೆದರು. ಸಾಮಾನ್ಯವಾಗಿ ಗಣಕ ಬಳಸುವವರೆಲ್ಲ ಒಮ್ಮೆಯಾದರೂ ಗಮನಿಸಿರಬಹುದಾದ ಒಂದು ವಾಕ್ಯವಿದೆ. ಅದು The quick brown fox jumps over the lazy dog. ಏನೀ ವಾಕ್ಯದ ವಿಶೇಷ? ಈ ವಾಕ್ಯದಲ್ಲಿ ಇಂಗ್ಲೀಷ್ ಭಾಷೆಯ ಎಲ್ಲ ಅಕ್ಷರಗಳೂ ಇವೆ. ಯಾವುದಾದರೊಂದು ಫಾಂಟ್‌ನಲ್ಲಿ ಅಕ್ಷರಗಳು ಹೇಗೆ ಕಾಣಿಸುತ್ತವೆ ಎಂಬುದನ್ನು ಉದಾಹರಿಸಲು ಈ ವಾಕ್ಯವನ್ನು ಬಳಸುತ್ತಾರೆ.

ನಂ.1 ಆಗುವುದು ಹೇಗೆ?

Filed under: General Friday, January 26th, 2007  By  |

ಶೀರ್ಷಿಕೆ ಓದಿದ ತಕ್ಷಣ ನಿಮ್ಮ ಮನದಲ್ಲಿ ಏನು ಆಲೋಚನೆ ಬಂದಿರಬಹುದು ಎಂಬುದನ್ನು ನಾನು ಊಹಿಸಬಲ್ಲೆ. ವ್ಯಕ್ತಿತ್ವ ವಿಕಸನದ ಬಗ್ಗೆ ಕೊರೆಯಲು ಹೊರಟಿದ್ದೇನೆ ಎಂದುಕೊಂಡಿದ್ದೀರಾ? ಖಂಡಿತ ಇಲ್ಲ. ನೀವು ನಿಜವಾಗಿಯೂ ನಂ.1 ಆಗಬೇಕಿದ್ದರೆ ಅದರ ಬಗ್ಗೆ ಮಾರುಕಟ್ಟೆಯಲ್ಲಿ ಬೇಕಾದಷ್ಟು ಪುಸ್ತಕಗಳಿವೆ. ಕೊಂಡು ಓದಬಹದು. ಅವುಗಳನ್ನು ಕೊಂಡರೆ ನೀವು ನಂ.1 ಆಗುತ್ತೀರೋ ಇಲ್ಲವೋ, ಆದರೆ, ಪುಸ್ತಕ ಬರೆದವರು ಮತ್ತು ಪ್ರಕಾಶಿಸಿದವರು ನಂ.1 ಆಗುತ್ತಾರೆ.

ಕಾರಾಗೃಹವನ್ನೂ ಭಾರತಕ್ಕೆ ಹೊರಗುತ್ತಿಗೆ ನೀಡಿ!

Filed under: General Sunday, October 22nd, 2006  By  |

ಭಾರತವು ಹೊರಗುತ್ತಿಗೆ (ಔಟ್‌ಸೋರ್ಸಿಂಗ್‌) ಯಲ್ಲಿ ತುಂಬ ಸುದ್ದಿ ಮಾಡಿರುವುದು ಎಲ್ಲರಿಗೂ ತಿಳಿದ ವಿಚಾರ. ಅಮೇರಿಕ ದೇಶದಲ್ಲಂತೂ ಸರಕಾರಿ ಕಾಲ್‌ಸೆಂಟರ್‌ಗಳನ್ನು ಭಾರತಕ್ಕೆ ಹೊರಗುತ್ತಿಗೆ ನೀಡಬಾರದು ಎಂದು ಒಂದು ರಾಜ್ಯದಲ್ಲಿ ಕಾನೂನನ್ನೇ ಮಾಡಿದ್ದಾರೆ. ಈ ಹೊರಗುತ್ತಿಗೆ ಎನ್ನುವುದು ಕೇವಲ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನಾಧಾರಿತ ಕ್ಷೇತ್ರಗಳಿಗೆ ಸೀಮಿತವಾಗಿ ಉಳಿದಿಲ್ಲ. ಕ್ಲಿನಿಕಲ್ ಪರೀಕ್ಷೆಗಳನ್ನೂ ಭಾರತಕ್ಕೆ ರವಾನಿಸಲು ತೊಡಗಿದ್ದಾರೆ. ಅದೇನು ಮಹಾ? ಕ್ರಿಶ್ಚಿಯನ್ ಪ್ರಾರ್ಥನೆಗಳೂ ಭಾರತಕ್ಕೆ ಬರುತ್ತಿವೆ. ಅಮೇರಿಕ ಮಾತ್ರವಲ್ಲ. ಇಂಗ್ಲೆಂಡಿನಿಂದಲೂ ಪ್ರಾರ್ಥನಾ ಸೇವೆಗಳನ್ನು ಭಾರತೀಯ ಪಾದರಿಗಳು ಪಡೆದುಕೊಳ್ಳುತ್ತಿದ್ದಾರೆ.

RSS Feeds